Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:15 - ಪರಿಶುದ್ದ ಬೈಬಲ್‌

15 ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:15
72 ತಿಳಿವುಗಳ ಹೋಲಿಕೆ  

ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.


ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.


ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.


ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.


ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆ ಮತ್ತು ವಿಧೇಯತೆಯುಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.


ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ!


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನ ಹೆಸರು ಅತಿ ಪರಿಶುದ್ಧವಾದದ್ದು.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು.


ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.


ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.


ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.


ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.


ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.


“ಯೆಹೋವನು ಎಂದೆಂದಿಗೂ ಆಳುವನು!”


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ.


ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು.


ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.


ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.


ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.


ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, ದೀನರಿಗಾದರೋ ಸಹಾಯಮಾಡುವನು.


ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.


ಆಗ ಜನರು ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.


ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.


ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?


ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿಹಿಡಿಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು