Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:18 - ಪರಿಶುದ್ದ ಬೈಬಲ್‌

18 ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:18
32 ತಿಳಿವುಗಳ ಹೋಲಿಕೆ  

“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.


ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಹೀಗೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.


ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಇನ್ನೂ ಜೀವದಿಂದಿರುವ ಪ್ರತಿಯೊಬ್ಬರಿಗೂ ನಿರೀಕ್ಷೆಯಿದೆ. ಜೀವಂತವಾಗಿರುವ ನಾಯಿ ಸತ್ತ ಸಿಂಹಕ್ಕಿಂತಲೂ ಉತ್ತಮ ಎಂಬ ನುಡಿ ಎಷ್ಟೋ ಸತ್ಯ.


ನಿನ್ನ ರಕ್ಷಣೆಯಿಂದುಂಟಾಗುವ ಆನಂದವನ್ನು ನನಗೆ ಮತ್ತೆ ದಯಪಾಲಿಸು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು.


ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು.


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.


ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ.


ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.


ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.


ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತೈಸಿದನು.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು