Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:11 - ಪರಿಶುದ್ದ ಬೈಬಲ್‌

11 ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:11
35 ತಿಳಿವುಗಳ ಹೋಲಿಕೆ  

ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು.


ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.


ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿಕೊಳ್ಳುವನು.


ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು.


‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.


ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.


ಮರುಭೂಮಿಯಲ್ಲಿ ನಿಮ್ಮನ್ನು ತಿಳಿದುಕೊಂಡಿದ್ದೆನು. ಆ ಒಣಭೂಮಿಯಲ್ಲಿ ನಾನು ನಿಮ್ಮನ್ನು ಬಲ್ಲೆನು.


ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.


ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೋ ಅಭಿವೃದ್ಧಿ ಹೊಂದುವನು.


ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.


ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!


ಆಪತ್ಕಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ. ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.


ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ. ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು.


ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು.


ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ಆತನು ನಿನ್ನನ್ನು ಸಂರಕ್ಷಿಸುವನು.


ನಾವು ನಿಮ್ಮ ಬಳಿಗೆ ಬರಲು ಮಾರ್ಗವನ್ನು ಸರಾಗಗೊಳಿಸುವಂತೆ ನಮ್ಮ ತಂದೆಯಾದ ದೇವರಿಗೂ ಪ್ರಭುವಾದ ಯೇಸುವಿಗೂ ಪ್ರಾರ್ಥಿಸುತ್ತೇವೆ.


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.


ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.


ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.


“ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು