Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:4 - ಪರಿಶುದ್ದ ಬೈಬಲ್‌

4 ನೀವು ಆಹಾರಕ್ಕಾಗಿ ಹಸಿವೆಯಿಂದಿಲ್ಲ. ನೀವು ಜಗಳ, ವಾಗ್ವಾದಕ್ಕಾಗಿ ಹಸಿದಿದ್ದೀರಿ. ನಿಮ್ಮ ಕ್ರೂರ ಕೈಗಳಿಂದ ಜನರನ್ನು ಹೊಡೆಯಲು ಹಸಿವೆಯಿಂದಿದ್ದೀರಿ. ನೀವು ಉಪವಾಸ ಮಾಡುವಾಗ ನನಗಾಗಿ ಮಾಡುವದಿಲ್ಲ. ನನ್ನನ್ನು ಸ್ತುತಿಸಲು ನೀವು ನಿಮ್ಮ ಸ್ವರವನ್ನು ಉಪಯೋಗಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ : ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೋಡಿರಿ, ನಿಮ್ಮ ಉಪವಾಸದ ಫಲವೇನಂದರೆ - ವ್ಯಾಜ್ಯ, ಕಲಹ, ಕೇಡಿನ ಗುದ್ದು, ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಹೊಡೆದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:4
16 ತಿಳಿವುಗಳ ಹೋಲಿಕೆ  

ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: ಸ್ವಲ್ಪ ಸಮಯದವರೆಗೆ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಆಹಾರವನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾರೂ ಊಟಮಾಡಬಾರದು, ನೀರು ಕುಡಿಯಬಾರದು.


ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.


ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು