Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:6 - ಪರಿಶುದ್ದ ಬೈಬಲ್‌

6 “ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:6
18 ತಿಳಿವುಗಳ ಹೋಲಿಕೆ  

ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ಗುಲಾಮರು ತಮ್ಮ ಯಜಮಾನರಿಗೆ ಸಂಪೂರ್ಣ ಗೌರವ ಕೊಡಬೇಕು. ಆಗ ದೇವರ ಹೆಸರಾಗಲಿ ನಮ್ಮ ಉಪದೇಶವಾಗಲಿ ಟೀಕೆಗೆ ಗುರಿಯಾಗುವುದಿಲ್ಲ.


ನೀನು ಅತೀವ ಅಸೂಯೆಯಿಂದ ತುಂಬಿದವನೂ ಪಾಪದ ಆಳ್ವಿಕೆಗೆ ಒಳಗಾದವನೂ ಆಗಿರುವೆ” ಎಂದು ಹೇಳಿದನು.


ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವನನ್ನು ಉಳಿಸಲು ಪ್ರಯತ್ನಿಸು.


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು.


ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.


ಈಗ ನೀವು ನನ್ನ ಮಾತನ್ನು ಕೇಳಿರಿ, ನೀವು ಸೆರೆಹಿಡಿದ ನಿಮ್ಮ ಸಹೋದರ ಸಹೋದರಿಯರನ್ನು ಹಿಂದಕ್ಕೆ ಕಳುಹಿಸಿರಿ. ಯಾಕೆಂದರೆ ಯೆಹೋವನು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ” ಎಂದು ಹೇಳಿದನು.


ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು.


“ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಯಾವದು ನ್ಯಾಯವೋ ಯಾವುದು ಯೋಗ್ಯವೋ ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆಕರುಣೆಗಳನ್ನು ತೋರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು