Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:14 - ಪರಿಶುದ್ದ ಬೈಬಲ್‌

14 ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿ ಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ನ್ಯಾಯವನ್ನು ಸಹ ಹಿಂದಕ್ಕೆ ತಳ್ಳಿಬಿಟ್ಟಿದ್ದೇವೆ. ನೀತಿಯನ್ನು ದೂರದಲ್ಲಿ ನಿಲ್ಲಿಸಿಬಿಟ್ಟಿದ್ದೇವೆ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಗೆ ಪ್ರವೇಶಿಸ ಇಲ್ಲಾ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಯು ಪ್ರವೇಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:14
25 ತಿಳಿವುಗಳ ಹೋಲಿಕೆ  

ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.


ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.


ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿನ್ಯಾಯಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು.


ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


“ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದುಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ.


ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. ನಮ್ಮ ಬಳಿಯಲ್ಲಿ ಅಂಧಕಾರವು ಇರುವದರಿಂದ ನಾವು ಬೆಳಕಿಗಾಗಿ ಕಾಯಬೇಕಾಗಿದೆ. ಪ್ರಕಾಶಮಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ.


ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


ಆ ಚಿಕ್ಕ ಕೊಂಬು ನಿತ್ಯಹೋಮಗಳನ್ನು ತಡೆಯುವ ಪಾಪವನ್ನು ಮಾಡಿತು. ಅದು ಒಳ್ಳೆಯತನವನ್ನು (ಸತ್ಯ, ಧರ್ಮವನ್ನು) ನೆಲಕ್ಕೆ ತಳ್ಳಿತು. ಇದೆಲ್ಲವನ್ನು ಮಾಡಿ ಆ ಚಿಕ್ಕ ಕೊಂಬು ತನ್ನ ಇಷ್ಟಾರ್ಥವನ್ನು ಸಾಧಿಸುವದರಲ್ಲಿ ಜಯ ಪಡೆಯಿತು.


ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವುಮುರುವು ಮಾಡುತ್ತೀರಿ. ಒಳ್ಳೆಯತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.


ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”


ಇಜ್ರೇಲಿನ ಹಿರಿಯರು ಮತ್ತು ಪ್ರಮುಖರಾದ ಜನರು ಆ ಆಜ್ಞೆಗನುಸಾರವಾಗಿ ಮಾಡಿದರು.


ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ.


“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು