Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:16 - ಪರಿಶುದ್ದ ಬೈಬಲ್‌

16 ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು ಕಂಡು ಸ್ಥಬ್ಧನಾದನು. ಆದ್ದರಿಂದ ಆತನ ಸ್ವಹಸ್ತವೇ ಆತನಿಗೆ ರಕ್ಷಣೆಯ ಸಾಧನವಾಯಿತು. ಆತನ ನೀತಿಯೇ ಆತನಿಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:16
19 ತಿಳಿವುಗಳ ಹೋಲಿಕೆ  

“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.


ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾನು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ.


ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.


ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.


ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.”


ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.


ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.


ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.


ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಯೆಹೋವನ ದಂಡನೆಯನ್ನು ನಿಜವಾಗಿಯೂ ಸ್ವೀಕರಿಸಿಕೊಂಡವರು ಯಾರು?


ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು