Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:11 - ಪರಿಶುದ್ದ ಬೈಬಲ್‌

11 ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:11
28 ತಿಳಿವುಗಳ ಹೋಲಿಕೆ  

ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು?


ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.


ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?


ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರಬೇಕು? ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ?


ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು.


ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.


ಬಂಗಾರವು ಯಾವ ರೀತಿಯಲ್ಲಿ ಅಪರೂಪವಾಗಿ ದೊರಕುವದೋ, ಅದೇ ಪ್ರಕಾರ ದೇಶದಲ್ಲಿ ಬಹು ಸ್ವಲ್ಪವೇ ಜನರು ಉಳಿಯುವದರಿಂದ ಅವರು ನೋಡಸಿಗುವದೇ ಅಪರೂಪ. ಅಂಥವರು ಚೊಕ್ಕಬಂಗಾರಕ್ಕಿಂತಲೂ ಬೆಲೆಬಾಳುವರು.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.


ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.


ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.


ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.


ನಿನ್ನ ದೇಶದಲ್ಲಿರುವ ಪಟ್ಟಣಗಳನ್ನು ಹಾಳುಮಾಡುವೆನು. ನಿನ್ನ ಕೋಟೆಗಳನ್ನೆಲ್ಲಾ ನಾಶಮಾಡುವೆನು.


ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ.


“ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.


ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು