Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:6 - ಪರಿಶುದ್ದ ಬೈಬಲ್‌

6 ಯಜ್ಞವೇದಿಕೆಯ ಮೇಲೆ ಬೆಂಕಿ ಇತ್ತು. ಸೆರಾಫಿಯರಲ್ಲೊಬ್ಬನು ಇಕ್ಕುಳಿಯಲ್ಲಿ ಬೆಂಕಿಯೊಳಗಿಂದ ಉರಿಯುವ ಕೆಂಡವನ್ನು ತೆಗೆದು ನನ್ನ ಬಳಿಗೆ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ತಂಡಸದಲ್ಲಿ ತೆಗೆದ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:6
14 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.


ನಮಗೊಂದು ಯಜ್ಞವಿದೆ. ಪವಿತ್ರ ಗುಡಾರದಲ್ಲಿ ಸೇವೆ ಸಲ್ಲಿಸುತ್ತಿರುವ ಯಾಜಕರು ನಮ್ಮ ಯಜ್ಞದಿಂದ ತಿನ್ನಲಾಗುವುದಿಲ್ಲ.


ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”


ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.


ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು.


“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು