ಯೆಶಾಯ 60:15 - ಪರಿಶುದ್ದ ಬೈಬಲ್15 “ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”