Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:17 - ಪರಿಶುದ್ದ ಬೈಬಲ್‌

17 “ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇವಿುಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:17
15 ತಿಳಿವುಗಳ ಹೋಲಿಕೆ  

ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಆ ಯೋಜನೆ.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”


ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.


ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.


ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


“ಉತ್ತರದ ರಾಜನ ತರುವಾಯ ಒಬ್ಬ ಹೊಸ ರಾಜನು ಬರುವನು. ಅವನು ಬಹು ವೈಭವಯುಕ್ತವಾದ ಜೀವನವನ್ನು ನಡೆಸಲಿಚ್ಛಿಸಿ ಅದಕ್ಕೆ ಬೇಕಾಗುವ ಹಣವನ್ನು ಸಂಗ್ರಹಿಸಲು ಒಬ್ಬ ತೆರಿಗೆ ಅಧಿಕಾರಿಯನ್ನು ಕಳುಹಿಸುವನು. ಆದರೆ ಕೆಲವು ವರ್ಷಗಳಲ್ಲಿ ಆ ರಾಜನು ನಾಶವಾಗುವನು. ಆದರೆ ಅವನು ಯುದ್ಧದಲ್ಲಿ ಮಡಿಯುವದಿಲ್ಲ.


‘ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ಈ ಎರಡು ಕೊಠಡಿಗಳ ನೆಲಕ್ಕೆ ಚಿನ್ನದ ತಗಡನ್ನು ಹಾಸಿದ್ದರು.


ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ, ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ.


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು