Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:22 - ಪರಿಶುದ್ದ ಬೈಬಲ್‌

22 ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೆ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಚಿಕ್ಕವನಿಂದ ಒಂದು ಕುಲವಾಗುವದು, ಅಲ್ಪನಿಂದ ಬಲವಾದ ಜನಾಂಗವಾಗುವದು; ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕನಿಷ್ಠನು ಸಾವಿರವಾಗುವನು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತ ಕಾಲದಲ್ಲಿ ಇದನ್ನು ಬಹು ಬೇಗನೆ ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:22
15 ತಿಳಿವುಗಳ ಹೋಲಿಕೆ  

ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.


ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”


“ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು