Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:6 - ಪರಿಶುದ್ದ ಬೈಬಲ್‌

6 ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:6
30 ತಿಳಿವುಗಳ ಹೋಲಿಕೆ  

ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ.


ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್.


ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.”


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆಗ ನಿಮ್ಮನ್ನು “ಯೆಹೋವನ ಯಾಜಕರು” ಎಂತಲೂ “ದೇವರ ಸಹಾಯಕರು” ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನನನ್ನು ಸಂಧಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.


ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.


ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.


ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.


ಇಷ್ಮಾಯೇಲನ ಗಂಡುಮಕ್ಕಳ ಹೆಸರುಗಳು: ಮೊದಲನೆ ಮಗನು ನೆಬಾಯೋತ್. ಆಮೇಲೆ ಹುಟ್ಟಿದವರು: ಕೇದಾರ್, ಅದ್ಬಯೇಲ್, ಮಿಬ್ಸಾಮ್,


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.


ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.


ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ಮಿದ್ಯಾನನ ಗಂಡುಮಕ್ಕಳು ಯಾರೆಂದರೆ: ಏಫ, ಏಫೆರ್, ಹನೋಕ್, ಅಬೀದ ಮತ್ತು ಎಲ್ದಾಯ. ಇವರು ಕೆಟೂರಳ ಸಂತತಿಯವರು.


ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು