Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:3 - ಪರಿಶುದ್ದ ಬೈಬಲ್‌

3 ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:3
39 ತಿಳಿವುಗಳ ಹೋಲಿಕೆ  

ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.


ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಒಳ್ಳೆಯ ಉಡುಪುಗಳನ್ನು ಧರಿಸಿಕೊಂಡು ನಿನ್ನನ್ನು ಅಲಂಕರಿಸಿಕೊ.


ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.


ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.


ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು.


ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.


ಪ್ರಭುವಾದ ಯೇಸು ಪ್ರತ್ಯಕ್ಷನಾದಾಗ ಇದು ಸಂಭವಿಸುತ್ತದೆ. ಆತನು ತನಗೆ ದೊರೆಯ ಬೇಕಾದ ವೈಭವವನ್ನು ಸ್ವೀಕರಿಸಲು ತನ್ನ ಪರಿಶುದ್ಧ ಜನರೊಂದಿಗೆ ಪ್ರತ್ಯಕ್ಷನಾಗುತ್ತಾನೆ. ಆತನನ್ನು ನಂಬಿದ ಜನರೆಲ್ಲರೂ ಆತನನ್ನು ಕಂಡು ಆಶ್ಚರ್ಯಚಕಿತರಾಗುವರು. ನಾವು ಹೇಳಿದ್ದನ್ನು ನಂಬಿದ ನೀವೆಲ್ಲರೂ ವಿಶ್ವಾಸಿಗಳ ಆ ಸಮೂಹದಲ್ಲಿರುವಿರಿ.


ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.


ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”


ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!


ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.


ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.


ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೆಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ.


ನಾನು ನದಿಯ ತೀರದಲ್ಲಿ ನಡೆಯುತ್ತಿರುವಾಗ ಅದರ ಎರಡೂ ಕಡೆಗಳಲ್ಲಿ ಲೆಕ್ಕವಿಲ್ಲದಷ್ಟು ಮರಗಳನ್ನು ನೋಡಿದೆನು.


ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು