Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:8 - ಪರಿಶುದ್ದ ಬೈಬಲ್‌

8 ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:8
34 ತಿಳಿವುಗಳ ಹೋಲಿಕೆ  

ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.


ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.


“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ.


ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.


ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.


ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು. ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ದೇವರು, “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿಬನ್ನಿರಿ” ಎಂದು ಆಜ್ಞಾಪಿಸುವನು.


ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ಆತನು ಅದನ್ನು ಯಾಕೋಬನಿಗೆ ಕಟ್ಟಳೆಯನ್ನಾಗಿ ಮಾಡಿದನು. ದೇವರು ಇಸ್ರೇಲನೊಂದಿಗೆ ತನ್ನ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.


ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.


“ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.


ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.


ಆದರೆ ನೀನು ಎಳೆಯವಳಾಗಿದ್ದಾಗ ನಿನ್ನೊಡನೆ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. ನಾನು ಅದನ್ನು ಶಾಶ್ವತವಾದ ಒಡಂಬಡಿಕೆಯನ್ನಾಗಿ ಮಾಡುವೆನು.


“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು