Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:10 - ಪರಿಶುದ್ದ ಬೈಬಲ್‌

10 ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:10
27 ತಿಳಿವುಗಳ ಹೋಲಿಕೆ  

ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.


ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!


ನೀವು ಯೋಗ್ಯವಾದ ಮಾರ್ಗದಲ್ಲಿ ಜೀವಿಸಿದರೆ ರಕ್ಷಣೆ ಹೊಂದುವಿರಿ ಮತ್ತು ನಿಮ್ಮನ್ನು ನಾಶಗೊಳಿಸಲು ನಿಮ್ಮ ಬಲಹೀನತೆಗಳಿಗೆ ಸಾಧ್ಯವಾಗುವುದಿಲ್ಲ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು.


ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.


ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.


ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!


ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು.


ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.


ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.


ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.


ನಾನು ನನ್ನ ಜನರಿಗೊಂದು ಮಾರ್ಗ ಸಿದ್ಧಮಾಡುವೆನು. ಬೆಟ್ಟವು ನೆಲದ ಮಟ್ಟಕ್ಕೆ ಇಳಿಯುವುದು; ತಗ್ಗು ಏರಿಸಲ್ಪಡುವದು.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”


ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.


“ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”


ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.


ಆ ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲಿ ಕ್ರೂರಜಂತುಗಳಾಗಲಿ ಆ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಆ ಮಾರ್ಗವಿರುವುದು.


ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು