Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:4 - ಪರಿಶುದ್ದ ಬೈಬಲ್‌

4 ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:4
32 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.


ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.


ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’”


ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದ್ದರಿಂದ ನೀನು ಬಹಳವಾಗಿ ಸಂತೋಷಿಸು. ಯೆಹೋವನು ಹೇಳುವುದೇನೆಂದರೆ, “ಗಂಡ ಬಿಟ್ಟಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.”


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.


ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”


ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


ಆಗ ಎಲ್ಲಾ ಜನಾಂಗದವರು ಆಕೆಯ ನ್ಯಾಯವನ್ನು ನೋಡುವರು. ಎಲ್ಲಾ ಅರಸರುಗಳು ಆಕೆಯ ಮಹಿಮೆಯನ್ನು ನೋಡುವರು. ಆಗ ನಿನಗೊಂದು ಹೊಸ ಹೆಸರನ್ನು ಕೊಡುವೆನು; ಯೆಹೋವನು ತಾನೇ ಆ ಹೆಸರನ್ನು ಕೊಡುವನು.


“ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


“ಇತರ ಜನಾಂಗಗಳವರು ನಿಮ್ಮೊಂದಿಗೆ ಸಮಾಧಾನದಿಂದಿರುವರು. ನಿಜವಾಗಿಯೂ ನಿಮ್ಮ ದೇಶವು ಆಗ ಆಶ್ಚರ್ಯಕರವಾದ ದೇಶವಾಗಿರುವುದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.


ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.


‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.


ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.


ಭೂಮಿಯು ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕೊಡುವದು. ಇಜ್ರೇಲಿನ ಅವಶ್ಯಕತೆಗಳನ್ನು ಅವು ದೊರಕಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು