Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:10 - ಪರಿಶುದ್ದ ಬೈಬಲ್‌

10 ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:10
48 ತಿಳಿವುಗಳ ಹೋಲಿಕೆ  

ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ.


ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆ ಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.


ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನ್ನ ಬಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಬಹಳ ಕೋಪ ಬಂದಿದೆ; ಅದಕ್ಕಾಗಿ ನನ್ನ ಬಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಬಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ತೋರಿಸುತ್ತೇನೆ.


ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!


“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


“ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.


ಅವರು ಮೋಶೆಗೆ ದೂರು ಹೇಳತೊಡಗಿದರು. “ಈಗ, ನಾವೇನು ಕುಡಿಯೋಣ?” ಎಂದು ಅವರು ಕೇಳಿದರು.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


ಆತನು ನನ್ನೊಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಎಷ್ಟೋಬಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ.


“ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆ ಕೆಳಗಾದಂತೆ ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿದ್ದುದರಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನೆಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು.


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


“ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ದಿನವೆಲ್ಲಾ ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.


ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ಆದರೂ ಅವರು ಅರಣ್ಯದಲ್ಲಿ ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು.


ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು. ಇದರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು.


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ.


ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


“ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ.


ಆ ಜನರು ಹೇಳಿದ್ದನ್ನು ಕೇಳಿ ಯೆಹೋವನು ಕೋಪಗೊಂಡನು. ಆತನು ಯಾಕೋಬ್ಯರ ಮೇಲೆಯೂ ಇಸ್ರೇಲರ ಮೇಲೆಯೂ ಕೋಪಗೊಂಡನು.


ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು