Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:14 - ಪರಿಶುದ್ದ ಬೈಬಲ್‌

14 ಹೊಲದಲ್ಲಿ ನಡೆಯುತ್ತಿರುವಾಗ ಒಂದು ದನವೂ ಬೀಳಲಿಲ್ಲ. ಅದೇ ರೀತಿಯಲ್ಲಿ ಸಮುದ್ರದ ಮಧ್ಯದಲ್ಲಿ ನಡೆಯುವಾಗ ಅವರು ಬೀಳಲಿಲ್ಲ. ವಿಶ್ರಾಂತಿಯ ಸ್ಥಳಕ್ಕೆ ಯೆಹೋವನ ಆತ್ಮವು ಅವರನ್ನು ನಡೆಸಿತು. ದಾರಿಯುದ್ದಕ್ಕೂ ಜನರು ಸುರಕ್ಷಿತರಾಗಿದ್ದರು. ಯೆಹೋವನೇ, ಹೀಗೆ ನೀನು ನಿನ್ನ ಜನರನ್ನು ನಡೆಸಿದೆ. ಹೀಗೆ ನೀನು ನಿನ್ನ ಹೆಸರನ್ನು ಆಶ್ಚರ್ಯಕರವನ್ನಾಗಿ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಆತ್ಮವು ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಅವರನ್ನು ವಿಶ್ರಮಸ್ಥಾನಕ್ಕೆ ಕರತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವದಕ್ಕಾಗಿ ನಿನ್ನ ಜನರನ್ನು ಹೀಗೆ ನಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪಶುವು ತಗ್ಗಿಗೆ ಇಳಿಯುವ ಪ್ರಕಾರ, ಯೆಹೋವ ದೇವರ ಆತ್ಮರು ಅವರಿಗೆ ವಿಶ್ರಾಂತಿಯನ್ನು ಕೊಟ್ಟರು. ಈ ಪ್ರಕಾರ ನೀವು ನಿಮಗೆ ಮಹಿಮೆಯುಳ್ಳ ಹೆಸರನ್ನು ಉಂಟುಮಾಡುವುದಕ್ಕಾಗಿ, ನಿಮ್ಮ ಜನರನ್ನು ನಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:14
17 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ಕ್ರಿಸ್ತನನ್ನು ನಿರೀಕ್ಷಿಸಿಕೊಂಡಿರುವವರಲ್ಲಿ ನಾವೇ ಮೊದಲಿಗರು. ದೇವರ ಮಹಿಮೆಗೆ ಸ್ತೋತ್ರವನ್ನು ಉಂಟುಮಾಡಬೇಕೆಂದೇ ನಮ್ಮನ್ನು ಆರಿಸಿಕೊಳ್ಳಲಾಯಿತು.


ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.


ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.


“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.


ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.


ಆದಾಗ್ಯೂ ನನ್ನ ಜೀವದಾಣೆ ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,


ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.


ಯೆಹೋವನೇ ಇಸ್ರೇಲನ್ನು ನಡೆಸಿದನು. ಅನ್ಯದೇವರು ಸಹಾಯ ಮಾಡಲಿಲ್ಲ.


ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.


ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು