Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:3 - ಪರಿಶುದ್ದ ಬೈಬಲ್‌

3 ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ತುಳಿದೆನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ತುಳಿದೆನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದ್ದರಿಂದ ನನ್ನ ಬಟ್ಟೆಗಳು ಮಲಿನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನೊಬ್ಬನಾಗಿಯೇ ದ್ರಾಕ್ಷೆಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ಕಾಲಿನಿಂದ ಹೊಸಗಿದೆನು; ಅವರ ಸಾರವು ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಾಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ. ಜನಾಂಗಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ. ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ್ನ ಉರಿಯಲ್ಲಿ ಅವರನ್ನು ಜಜ್ಜಿದ್ದೇನೆ. ಆದ್ದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಸಿಡಿದು, ನನ್ನ ವಸ್ತ್ರಕ್ಕೆ ಮೆತ್ತಿಕೊಂಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:3
18 ತಿಳಿವುಗಳ ಹೋಲಿಕೆ  

ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.


ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.


ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”


ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.


ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.


ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!


ಕುಡಿದು ಮತ್ತರಾದ ಎಫ್ರಾಯೀಮ್ಯರಿಗೆ ಸುಂದರವಾದ ಕಿರೀಟದ ಮೇಲೆ ಹೆಚ್ಚಳ. ಆದರೆ ಆ ನಗರವು ತುಳಿಯಲ್ಪಡುವದು.


ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.


ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪಿಪಾಯಿಗಳು ತುಂಬಿತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ!


ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು