Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:6 - ಪರಿಶುದ್ದ ಬೈಬಲ್‌

6 ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು. ನನ್ನ ಉರಿಯಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು. ಅವರ ರಕ್ತವನ್ನು ಭೂಮಿಗೆ ಸುರಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:6
24 ತಿಳಿವುಗಳ ಹೋಲಿಕೆ  

ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.


ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.


ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!


ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ.


ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ; ಸರ್ವಶಕ್ತನಾದ ದೇವರ ಕೋಪವನ್ನು ಅನುಭವಿಸಲಿ.


ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


ಟಗರುಗಳು, ದನಕುರಿಗಳು ಮತ್ತು ಬಲವಾದ ಹೋರಿಗಳು ಕೊಲ್ಲಲ್ಪಡುವವು. ಭೂಮಿಯು ಅವುಗಳ ರಕ್ತದಿಂದ ತುಂಬಿಹೋಗುವದು. ಅಲ್ಲಿನ ಧೂಳು ಅವುಗಳ ಕೊಬ್ಬಿನಿಂದ ಆವೃತವಾಗಿದೆ.


ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.


ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”


ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ.


ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು