Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:9 - ಪರಿಶುದ್ದ ಬೈಬಲ್‌

9 ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಸ್ವಾಮೀ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರೇ, ಅತ್ಯಧಿಕವಾಗಿ ಬೇಸರಗೊಳ್ಳಬೇಡ. ಎಂದೆಂದಿಗೂ ಪಾಪವನ್ನು ಜ್ಞಾಪಕ ಮಾಡಬೇಡ. ನೋಡಿರಿ, ನಾವು ಬೇಡುತ್ತೇವೆ, ದೃಷ್ಟಿ ಇಡಿರಿ. ನಾವೆಲ್ಲರೂ ನಿನ್ನ ಜನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:9
27 ತಿಳಿವುಗಳ ಹೋಲಿಕೆ  

ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ.


ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.


ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ಯೆಹೋವನೇ, ನೀನು ನಮ್ಮನ್ನು ಶಾಶ್ವತವಾಗಿ ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದುಬಿಟ್ಟಿರುವುದೇಕೆ?


ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ.


ಯೆರೆಮೀಯನೇ, ಹೋಗು. ಈ ಸಂದೇಶವನ್ನು ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ: “‘ವಿಶ್ವಾಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಬನ್ನಿ.’ ‘ನಾನು ಕೋಪಮುಖದಿಂದ ನಿಮ್ಮನ್ನು ನೋಡುವುದನ್ನು ನಿಲ್ಲಿಸುವೆನು. ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.’ ಇದು ಯೆಹೋವನ ನುಡಿ.


ಕೆಲವರು ನಿನ್ನನ್ನು ಅನುಸರಿಸುವದಿಲ್ಲ. ಅವರು ನಿನ್ನ ಹೆಸರಿನಿಂದ ಕರೆಯಲ್ಪಡುವದಿಲ್ಲ. ನಾವು ಅವರಂತೆ ಇದ್ದೆವು.


ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. “ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.


ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ನಾನು ನಿನ್ನವನು, ನನ್ನನ್ನು ರಕ್ಷಿಸು! ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.


ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದ್ದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.


“ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.


ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ.


ಇಸ್ರೇಲರು ಅವರ ಮೇಲೆ ಇನ್ನು ಎಂದಿಗೂ ಭರವಸವಿಡುವುದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಬಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸವಿಟ್ಟಿದ್ದ ಪಾಪವನ್ನು ಅರಿತುಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು