Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:14 - ಪರಿಶುದ್ದ ಬೈಬಲ್‌

14 ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಆತ್ಮಕ್ಲೇಶದಿಂದ ಗೋಳಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:14
17 ತಿಳಿವುಗಳ ಹೋಲಿಕೆ  

ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ.


ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.


ಶ್ರೀಮಂತ ಜನರೇ, ಕೇಳಿರಿ! ನಿಮಗೆ ಮಹಾಕಷ್ಟವು ಬರಲಿರುವುದರಿಂದ ಗೋಳಾಡಿರಿ, ದುಃಖಪಡಿರಿ.


“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನು ನೀವು ನೋಡುವಿರಿ. ಆದರೆ ನಿಮ್ಮನ್ನು ಹೊರಗೆ ಹಾಕಲಾಗುವುದು. ಆಗ ನೀವು ಭಯದಿಂದಲೂ ಕೋಪದಿಂದಲೂ ಕೂಗಿಕೊಳ್ಳುವಿರಿ.


ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.


ಬೆಂಕಿಯ ಸ್ಥಳಕ್ಕೆ ಎಸೆದುಬಿಡುವರು. ಅಲ್ಲಿ ಅವರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.


ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.


ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.


ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿದ್ದ ವಿಧವೆಯರಿಗೆ ನನ್ನಿಂದ ಆನಂದವಾಯಿತು.


ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೋ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.


ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


“ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು