Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:20 - ಪರಿಶುದ್ದ ಬೈಬಲ್‌

20 ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ಯರು ಯೆಹೋವನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಾಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧ ಪರ್ವತಕ್ಕೆ ಕರತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:20
20 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.


ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.


“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.


ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”


ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.


ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ಗೋತ್ರಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು