Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:19 - ಪರಿಶುದ್ದ ಬೈಬಲ್‌

19 ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವೆಲ್ಲಾ ಬಂದು ಕಡಿದಾದ ಡೊಂಗರಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಎಲ್ಲಾ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:19
11 ತಿಳಿವುಗಳ ಹೋಲಿಕೆ  

ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.


ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.


ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು. ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.


ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ದೇಶವು ಕಾಡಾಗುವುದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.


ಒಂದು ಕಾಲದಲ್ಲಿ ಜನರು ಈ ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ ಆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಆ ಸ್ಥಳಗಳಿಗೆ ದನಕುರಿಗಳು ಮಾತ್ರವೇ ಹೋಗುತ್ತವೆ.”


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


“ನಾನು ಸಿಳ್ಳು ಹೊಡೆದು ಎಲ್ಲರನ್ನು ಒಟ್ಟುಗೂಡಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು