Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:20 - ಪರಿಶುದ್ದ ಬೈಬಲ್‌

20 ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:20
17 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.


“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ನೆಬೂಕದ್ನೆಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನ್ನು ಕೊಟ್ಟೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ.


ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ಎಲ್ಲಾ ಪಟ್ಟಣಗಳ ವಿರುದ್ಧ ದಂಡೆತ್ತಿ ಬಂದು ಅವುಗಳನ್ನೆಲ್ಲ ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು