Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:21 - ಪರಿಶುದ್ದ ಬೈಬಲ್‌

21 “ಆ ಕಾಲದಲ್ಲಿ ಯಾವನೇ ಆಗಲಿ ಹಸುವನ್ನೂ ಎರಡು ಕುರಿಗಳನ್ನೂ ಸಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಂದು ಒಬ್ಬ ರೈತನು ಒಂದು ಕಡಸನ್ನು ಎರಡು ಮೇಕೆಗಳನ್ನು ಮಾತ್ರ ಉಳಿಸಿಕೊಳ್ಳಬಲ್ಲವನಾದರೂ ಬಾಯಿ ಮೊಸರಾಗುವಷ್ಟು ಅಧಿಕವಾದ ಹಾಲನ್ನು ಕರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಕಾಲದಲ್ಲಿ ಯಾವನೇ ಆಗಲಿ ಹಸುವಿನ ಕಡಸನ್ನೂ ಎರಡು ಕುರಿಗಳನ್ನೂ ಸಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ದಿನದಲ್ಲಿ ಮನುಷ್ಯನು ಒಂದು ಹಸುವಿನ ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:21
8 ತಿಳಿವುಗಳ ಹೋಲಿಕೆ  

ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.


ಆತನು ಇಸ್ರೇಲ್ ದೇಶದ ಜನರನ್ನು ದೇಶಭ್ರಷ್ಟರನ್ನಾಗಿ ಮಾಡುವನು. ಆಗ ದೇಶವು ಬರಿದಾಗುವುದು. ಕುರಿಗಳು ತಮ್ಮ ಮನಸ್ಸು ಬಂದೆಡೆಗೆ ಹೋಗುವವು. ಐಶ್ವರ್ಯವಂತರಿಗೆ ಸೇರಿದ್ದ ಜಮೀನಿನ ಮೇಲೆ ಕುರಿಮರಿಗಳು ನಡೆದಾಡುವವು.


ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದ್ದರಿಂದ ಈ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.


ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟುಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.


ಒಂದು ಕಾಲದಲ್ಲಿ ಜನರು ಈ ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ ಆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಆ ಸ್ಥಳಗಳಿಗೆ ದನಕುರಿಗಳು ಮಾತ್ರವೇ ಹೋಗುತ್ತವೆ.”


ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.


ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು.


ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು