Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:23 - ಪರಿಶುದ್ದ ಬೈಬಲ್‌

23 ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ ಮುಳ್ಳುಗಿಳ್ಳು ಮುಚ್ಚಿಕೊಂಡು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:23
13 ತಿಳಿವುಗಳ ಹೋಲಿಕೆ  

ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


“ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.


ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.


ಆ ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.”


ದೇಶವು ಕಾಡಾಗುವುದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.


ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ.


ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.’”


ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರಿಯತಮರು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡುಪ್ರಾಣಿಗಳು ಬಂದು ತಿನ್ನುವವು.


ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.


ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು