Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:4 - ಪರಿಶುದ್ದ ಬೈಬಲ್‌

4 “ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:4
25 ತಿಳಿವುಗಳ ಹೋಲಿಕೆ  

ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.


ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


‘ಇಸ್ರೇಲ್ ಜನರೇ, ನನ್ನ ಮಾತನ್ನು ಆಲಿಸಿರಿ. ಈ ದಿವಸ ನಿಮ್ಮ ವೈರಿಗಳೊಂದಿಗೆ ಕಾದಾಡಲು ಹೋಗುತ್ತಿದ್ದೀರಿ. ನೀವು ಅಧೈರ್ಯಗೊಳ್ಳಬೇಡಿರಿ. ಗಲಿಬಿಲಿಗೆ ಸಿಕ್ಕಿಕೊಳ್ಳಬೇಡಿ; ವೈರಿಗಳಿಗೆ ಭಯಪಡಬೇಡಿರಿ.


ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.


ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”


ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.


“ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.


ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವುದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟ್ ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು.


ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.


ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.


ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಈ ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ಆಹಾಜನು ಯೋಥಾಮನ ಮಗನು. ಯೋಥಾಮನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.


ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”


ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಪೆಕಹನು ಇಪ್ಪತ್ತು ವರ್ಷ ಆಳಿದನು.


ನನ್ನ ಒಡೆಯನು ಹೀಗೆಂದನು: “ಈ ಜನರು ನಿಧಾನವಾಗಿ ಹರಿಯುವ ಸಿಲೋವ ಕೊಳದ ನೀರನ್ನು ಸ್ವೀಕರಿಸುವುದಿಲ್ಲ. ಇವರು ರೆಚೀನ್ ಮತ್ತು ರೆಮಲ್ಯನ ಮಗನೊಂದಿಗೆ ಸಂತೋಷದಲ್ಲಿದ್ದಾರೆ.


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು