Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:18 - ಪರಿಶುದ್ದ ಬೈಬಲ್‌

18 “ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:18
27 ತಿಳಿವುಗಳ ಹೋಲಿಕೆ  

ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.


ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”


ನಾನು ಅನೇಕರಿಗೆ ಮಾದರಿಯಾಗಿದ್ದೇನೆ. ಯಾಕೆಂದರೆ ನೀನೇ ನನ್ನ ಶಕ್ತಿಗೆ ಆಧಾರ.


ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು.


ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ದಾವೀದನು, “ಇಸ್ರೇಲರ ದೇವರಾದ ಯೆಹೋವನು ತನ್ನ ಜನರಿಗೆ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ದೇವರು ನಿರಂತರವೂ ಜೆರುಸಲೇಮಿನಲ್ಲಿ ವಾಸಿಸಲು ಬಂದಿರುತ್ತಾನೆ.


ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.


ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.


ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.


ಆಮೇಲೆ ನಾನು ಒಬ್ಬ ಪ್ರವಾದಿನಿಯ ಬಳಿಗೆ ಹೋದೆನು. ಆಕೆಯನ್ನು ಕೂಡಲು, ಆಕೆ ಗರ್ಭವತಿಯಾಗಿ ಒಬ್ಬ ಮಗನನ್ನು ಹಡೆದಳು. ಆಗ ಯೆಹೋವನು ನನಗೆ, “‘ಆ ಮಗನಿಗೆ ಮಹೇರ್ ಶಾಲಾಲ್ ಹಾಷ್ ಬಜ್‌’ ಎಂಬ ಹೆಸರನ್ನಿಡು.


ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.


ನೀವೂ ನಿಮ್ಮ ಸಂತತಿಯವರೂ ದೇವರ ಶಾಶ್ವತವಾದ ತೀರ್ಪನ್ನು ಹೊಂದಿದ್ದೀರೆಂಬುದಕ್ಕೆ ಬೇರೆಯವರಿಗೆ ಈ ಶಾಪಗಳೇ ಸೂಚನೆಯಾಗಿಯೂ ರುಜುವಾತಾಗಿಯೂ ಇರುತ್ತವೆ.


ಆಗ ಯೆಹೋವನು, “ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ.


ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.


ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.


ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”


ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


ಕುರುಬರು ತಿಳಿಸಿದ್ದನ್ನು ಕೇಳಿದ ಅವರೆಲ್ಲರೂ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು