Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:6 - ಪರಿಶುದ್ದ ಬೈಬಲ್‌

6 ನನ್ನ ಒಡೆಯನು ಹೀಗೆಂದನು: “ಈ ಜನರು ನಿಧಾನವಾಗಿ ಹರಿಯುವ ಸಿಲೋವ ಕೊಳದ ನೀರನ್ನು ಸ್ವೀಕರಿಸುವುದಿಲ್ಲ. ಇವರು ರೆಚೀನ್ ಮತ್ತು ರೆಮಲ್ಯನ ಮಗನೊಂದಿಗೆ ಸಂತೋಷದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ಉಪೇಕ್ಷಿಸಿ ರೆಚೀನನನ್ನೂ ರೆಮಲ್ಯನ ಮಗನನ್ನೂ ನಂಬಿ ಮೆರೆದದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:6
19 ತಿಳಿವುಗಳ ಹೋಲಿಕೆ  

ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.


ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.


ಲೆಬನೋನಿನ ಪರ್ವತಗಳ ಮೇಲಿನ ಹಿಮವು ಇಳಿಜಾರಿನ ಬಂಡೆಯಿಂದ ಎಂದಾದರೂ ಕರಗುವುದೇ? ಬಹುದೂರದಲ್ಲಿ ಹುಟ್ಟಿ ಹರಿದುಬರುವ ತೊರೆಗಳು ಎಂದಾದರೂ ಹರಿಯದೆ ನಿಂತುಹೋಗುವುದೇ?


ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”’”


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಈ ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು.


ಸಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ, ಸತ್ತುಹೋದ ಹದಿನೆಂಟು ಮಂದಿಯ ಕುರಿತು ನಿಮ್ಮ ಅಭಿಪ್ರಾಯವೇನು? ಜೆರುಸಲೇಮಿನಲ್ಲಿ ವಾಸವಾಗಿದ್ದ ಇತರರೆಲ್ಲರಿಗಿಂತಲೂ ಅವರು ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?


ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.


ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ.


ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”


ಮತ್ತೆ ಯೆಹೋವನು ನನ್ನೊಂದಿಗೆ ಮಾತನಾಡಿದನು.


ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.


ಇಸ್ರೇಲಿನ ಪರಿಶುದ್ಧನು ಹೇಳುವುದೇನೆಂದರೆ, “ಯೆಹೋವನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳಾಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ.


“ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು