Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:9 - ಪರಿಶುದ್ದ ಬೈಬಲ್‌

9 ಸಮಸ್ತ ಜನಾಂಗಗಳೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕಿಳಿಯಲು ಸಿದ್ಧರಾಗಿ! ನೀವು ಸೋಲುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:9
24 ತಿಳಿವುಗಳ ಹೋಲಿಕೆ  

ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ.


ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು.


ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಆದ್ದರಿಂದ ಆತನ ಮಾತು ಅವರಿಗೆ ಪರಭಾಷೆಯಂತೆ ಕೇಳಿಸುವುದು. “ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜೆಯಿರ್ ಶಾಮ್ ಜೆಯಿರ್ ಶಾಮ್.” ಜನರು ತಮ್ಮ ಇಷ್ಟಪ್ರಕಾರ ನಡೆದರು. ಆದ್ದರಿಂದ ಅವರು ಸೋಲಿಸಲ್ಪಟ್ಟರು. ಅವರು ಉರುಲಿಗೆ ಸಿಕ್ಕಿ ಹಾಕಿಕೊಂಡು ಹಿಡಿಯಲ್ಪಟ್ಟರು.


ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ನನ್ನ ಗದೆ. ಜನಾಂಗಗಳನ್ನು ಜಜ್ಜಿಹಾಕಲೂ ರಾಜ್ಯಗಳನ್ನು ಧ್ವಂಸ ಮಾಡಲೂ ನಾನು ನಿನ್ನನ್ನು ಬಳಸುತ್ತೇನೆ.


“‘ಸಿದ್ಧರಾಗಿರಿ! ನಿಮ್ಮೊಂದಿಗೆ ಸೇರಿರುವ ಸೈನ್ಯದೊಂದಿಗೆ ಸಿದ್ಧರಾಗಿರಿ. ನೀವು ಎಚ್ಚರವಾಗಿದ್ದು ಸಿದ್ಧರಾಗಿರಬೇಕು.


ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.


“ನಿಮ್ಮ ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಹೊರಡಿರಿ.


ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ.


ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು