Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:14 - ಪರಿಶುದ್ದ ಬೈಬಲ್‌

14 ಆದ್ದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ತಾಲತೃಣಗಳನ್ನೂ ಒಂದೇ ದಿನದಲ್ಲಿ ಕಡಿದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ ಬಾಲಗಳನ್ನೂ ಖರ್ಜೂರದ ಕೊಂಬೆಗಳನ್ನೂ ಒಂದೇ ದಿನದಲ್ಲಿ ಕಡಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:14
28 ತಿಳಿವುಗಳ ಹೋಲಿಕೆ  

ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


ಆ ನಾಯಕರುಗಳಿಗೆ ಏನೂ ಮಾಡಲಾಗದು. (ಈ ನಾಯಕರುಗಳು “ತಲೆಯೂ ಬಾಲವೂ” ಆಗಿದ್ದಾರೆ; “ಮರದ ಕೊಂಬೆಯೂ ಕಾಂಡವೂ” ಆಗಿದ್ದಾರೆ.)


ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು


ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.


ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”


ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.


ಆ ದಿನದಲ್ಲಿ ಬೇತೇಲು ನಿನಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.


“ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.


ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಗಳೂ ನಿಮ್ಮ ಜೊತೆಗೆ ಬೀಳುವರು ಮತ್ತು ನಾನು ನಿಮ್ಮ ತಾಯಿಯನ್ನು ಸಹ ನಾಶಮಾಡುವೆನು.


ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.


ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.


ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.


ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ.


ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.


“ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು