Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:10 - ಪರಿಶುದ್ದ ಬೈಬಲ್‌

10 ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಬಲ ಬದಿಯಲ್ಲಿ ಸಿಂಹದ ಮುಖ, ಎಡ ಬದಿಯಲ್ಲಿ ಹೋರಿಯ ಮುಖ, ಹಿಂಬದಿಯಲ್ಲಿ ಗರುಡನ ಮುಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮುಖಗಳು ಎಂಥವುಗಳಂದರೆ ಒಂದೊಂದರ [ಮುಂದಿನ] ಮುಖವು ಮನುಷ್ಯನದು, ಬಲಗಡೆಯ ಮುಖವು ಸಿಂಹನದು, ಎಡಗಡೆಯ ಮುಖವು ಹೋರಿಯದು, [ಹಿಂದಿನ] ಮುಖವು ಗರುಡಪಕ್ಷಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವುಗಳ ಮುಖಗಳು ಹೀಗಿದ್ದವು: ಪ್ರತಿಯೊಂದರ ಮುಂದಿನ ನಾಲ್ಕು ಮುಖಗಳು ಮನುಷ್ಯನ ಮುಖದಂತಿತ್ತು; ಬಲಗಡೆಯ ನಾಲ್ಕು ಮುಖಗಳು ಸಿಂಹದ ಮುಖದಂತಿತ್ತು; ಎಡಗಡೆಯ ನಾಲ್ಕು ಮುಖಗಳು ಹೋರಿಯ ಮುಖದಂತಿತ್ತು; ಹಿಂದಿನ ನಾಲ್ಕು ಮುಖಗಳು ಗರುಡಪಕ್ಷಿಯ ಮುಖದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:10
20 ತಿಳಿವುಗಳ ಹೋಲಿಕೆ  

ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೆಯ ಸಿಂಹದ ಮುಖ ಮತ್ತು ನಾಲ್ಕನೆಯ ಗರುಡನ ಮುಖ.


ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು.


ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


“ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು.


“ನೀವು ಪಾಪಮಾಡಿದ್ದೀರಿ. ನೀವು ಈ ವಿಚಾರವಾಗಿ ಮತ್ತೆ ಆಲೋಚಿಸಬೇಕು. ಈ ವಿಚಾರವನ್ನು ನಿಮ್ಮ ನೆನಪಿಗೆ ತಂದುಕೊಂಡು ಬಲಶಾಲಿಗಳಾಗಿರಿ.


ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.


ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ.


ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ?


ಅರಣ್ಯದಲ್ಲಿದ್ದ ಕೋಟೆಯಲ್ಲಿ ಗಾದ್ ಕುಲದ ಕೆಲವರು ದಾವೀದನನ್ನು ಸೇರಿಕೊಂಡರು. ಇವರು ಯುದ್ಧದಲ್ಲಿ ನುರಿತ ಸೈನಿಕರಾಗಿದ್ದರು. ಈಟಿ ಬರ್ಜಿಗಳಲ್ಲಿ ಪರಿಣಿತರು; ಸಿಂಹಗಳಂತೆ ಕ್ರೂರಿಗಳು; ಬೆಟ್ಟದ ಮೇಲೆ ಜಿಂಕೆಯ ತರಹ ವೇಗವಾಗಿ ಓಡಬಲ್ಲವರು.


ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದ್ದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.


“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.


“ದಾನ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಧ್ವಜದೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ದಾನ್ ಕುಲದ ನಾಯಕನು ಅಮ್ಮೀಷದ್ದೈಯನ ಮಗನಾದ ಅಹೀಗೆಜೆರ್.


“ಎಫ್ರಾಯೀಮ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳವರು ದೇವದರ್ಶನಗುಡಾರದ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ಎಫ್ರಾಯೀಮ್ ಕುಲದವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮ.


“ರೂಬೇನ್ ಕುಲ ಮತ್ತು ಅದರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿನುಸಾರವಾಗಿ ಪಾಳೆಯಮಾಡಿಕೊಳ್ಳಬೇಕು. ರೂಬೇನ್ ಕುಲದವರ ನಾಯಕನು ಶೆದೇಯೂರನ ಮಗನಾದ ಎಲೀಚೂರನು;


“ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನ.


ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ಆ ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.


ಒಂದು ಮುಖ ಮನುಷ್ಯನ ಮುಖದಂತಿದ್ದು ಖರ್ಜೂರ ವೃಕ್ಷವನ್ನು ದಿಟ್ಟಿಸುತ್ತಿತ್ತು. ಇನ್ನೊಂದು ಮುಖವು ಸಿಂಹದ ಮುಖದಂತಿದ್ದು ಆಚೆ ಪಕ್ಕದ ಖರ್ಜೂರ ವೃಕ್ಷವನ್ನು ನೋಡುವಂತಿತ್ತು. ಆಲಯದ ಸುತ್ತಲೂ ಈ ರೀತಿಯ ಕೆತ್ತನೆ ಕೆಲಸವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು