Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:18 - ಪರಿಶುದ್ದ ಬೈಬಲ್‌

18 ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:18
18 ತಿಳಿವುಗಳ ಹೋಲಿಕೆ  

ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”


ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.


ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.


ಆ ಲೇವಿಯನು ಮರುದಿನ ಬೆಳಿಗ್ಗೆ ಬೇಗ ಎದ್ದನು. ಅವನು ತನ್ನ ಮನೆಗೆ ಹೋಗಬೇಕೆಂದಿದ್ದನು. ಆದ್ದರಿಂದ ಹೊರಗೆ ಹೋಗಲು ಬಾಗಿಲು ತೆರೆದನು. ಬಾಗಿಲ ಮುಂದೆ ಹೊಸ್ತಿಲದ ಮೇಲೆ ಕೈಚಾಚಿ ಬಿದ್ದಿದ್ದ ತನ್ನ ಉಪಪತ್ನಿಯನ್ನು ಕಂಡನು.


ಗೋಡೆಗಳಿಗೆ ಮರದ ಹಲಗೆಗಳು ಹೊದಿಸಲ್ಪಟ್ಟಿದ್ದವು. ಎಲ್ಲಾ ಕಿಟಕಿ ಬಾಗಿಲುಗಳಿಗೆ ಮರದ ಹೊದಿಕೆಯಿತ್ತು. ದ್ವಾರದ ಪಕ್ಕದಲ್ಲಿ ಆಲಯದ ಗೋಡೆಗೆ ನೆಲದಿಂದ ಹಿಡಿದು ಕಿಟಕಿಯ ತನಕ ಮರದ ಹಲಗೆಯ ಹೊದಿಕೆ ಇತ್ತು.


ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.


ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ ಆತನು ಮರೆಯಾದನು.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.


ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಬ್ಬನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿದ್ದವು. ನಾನು ನಿನ್ನನ್ನು ದೇವರ ಪವಿತ್ರ ಪರ್ವತದಲ್ಲಿಟ್ಟೆನು. ನೀನು ಬೆಂಕಿಯಂತೆ ಹೊಳೆಯುವ ರತ್ನಗಳ ಮೇಲೆ ನಡೆದಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು