Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:2 - ಪರಿಶುದ್ದ ಬೈಬಲ್‌

2 ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಕೆರೂಬಿಯ ಕೆಳಗೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿತಂದು ಪಟ್ಟಣದ ಮೇಲೆ ಎರಚು ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೆ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:2
19 ತಿಳಿವುಗಳ ಹೋಲಿಕೆ  

ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು.


ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಬೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಬೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.


ಆಗ ನಾರುಬಟ್ಟೆಯನ್ನು ಧರಿಸಿಕೊಂಡು ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದವನು, “ನೀನು ಆಜ್ಞಾಪಿಸಿದ ಮೇರೆಗೆ ನಾನು ಮಾಡಿದೆ” ಅಂದನು.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


“ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.


ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು