Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:1 - ಪರಿಶುದ್ದ ಬೈಬಲ್‌

1 ಆಗ ಆತ್ಮವು ನನ್ನನ್ನು ಯೆಹೋವನಾಲಯದ ಪೂರ್ವದ ಬಾಗಿಲಿಗೆ ಕೊಂಡೊಯ್ಯಿತು. ಬಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನ್ನು ನೋಡಿದೆನು. ಅವರಲ್ಲಿ ಅಜ್ಜೂರನ ಮಗನಾದ ಯಾಜನ್ಯನನ್ನು, ಬೆನಾಯನ ಮಗನಾದ ಪೆಲತ್ಯನನ್ನು ನಾನು ನೋಡಿದೆನು. ಅವರಿಬ್ಬರು ಜನರಿಗೆ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ನಾನು ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನದೊಡೆಯರನ್ನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:1
23 ತಿಳಿವುಗಳ ಹೋಲಿಕೆ  

ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು.


ನಾನು ದೇವರ ಪರವಾಗಿ ಮಾತನಾಡುವದನ್ನು ನಿಲ್ಲಿಸಿದ ಕೂಡಲೇ, ಬೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಬಗ್ಗಿ, “ನನ್ನ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನ್ನು ಸಂಪೂರ್ಣವಾಗಿ ನಾಶಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು.


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.


ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಯೆಹೂದದ ನಾಯಕರು ಪರರ ಆಸ್ತಿಯನ್ನು ದೋಚುವ ಕಳ್ಳರಂತಿದ್ದಾರೆ. ಯೆಹೋವನಾದ ನಾನು ಅವರ ಮೇಲೆ ನನ್ನ ಕೋಪವನ್ನು ನೀರಿನಂತೆ ಸುರಿಸುವೆನು.


ಆಮೇಲೆ ಅವನು ನನ್ನನ್ನು ಪವಿತ್ರಸ್ಥಳಕ್ಕೆ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ ಗೋಡೆಯನ್ನು ಅವನು ಅಳತೆ ಮಾಡಿದನು. ಆ ಗೋಡೆಗಳು ಆರು ಮೊಳ ದಪ್ಪವಾಗಿದ್ದವು.


ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಹಾರಿದವು. ಅವು ಆಲಯವನ್ನು ಬಿಟ್ಟುಹೋಗುವದನ್ನು ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಬಾಗಿಲ ಬಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.


ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.


ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.


ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.


ಅವನು ಪೂರ್ವದ ದ್ವಾರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಬಳಿಗೆ ಹೋಗಿ ದ್ವಾರದ ಅಗಲವನ್ನು ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು