Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:19 - ಪರಿಶುದ್ದ ಬೈಬಲ್‌

19 ಅವರನ್ನು ಹಿಂದಕ್ಕೆ ಬರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನ್ನು ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನ್ನು ತೆಗೆದು ಮೃದುವಾದ ಹೃದಯವನ್ನಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:19
26 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.


ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.


ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.


ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.


ಆದರೆ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಹೊಂದಿಕೊಳ್ಳತಕ್ಕ ರೀತಿಯನ್ನು ನೀವು ಕಲಿತುಕೊಂಡಿರಿ.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು