Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:14 - ಪರಿಶುದ್ದ ಬೈಬಲ್‌

14 ಅವನ ಸುತ್ತಲೂ ಇರುವವರನ್ನೆಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿಬಿಡುವೆನು. ಅವನ ಕೆಲಸಗಾರರನ್ನು ಮತ್ತು ಅವನ ಸೈನ್ಯವನ್ನು ಗಾಳಿಗೆ ತೂರಿಬಿಡುವೆನು. ಮತ್ತು ಅವರನ್ನು ಖಡ್ಗದೊಡನೆ ಬೆನ್ನಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತವ್ಯೂಹಗಳವರನ್ನೂ ನಾನು ಎಲ್ಲ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:14
10 ತಿಳಿವುಗಳ ಹೋಲಿಕೆ  

ಅವನ ಸೈನ್ಯವನ್ನು ನಾಶಮಾಡುವೆನು. ಅವನಲ್ಲಿದ್ದ ಶೂರರನ್ನು ನಾಶಮಾಡುವೆನು. ಅಳಿದುಳಿದವರನ್ನು ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನ್ನು ಹೇಳಿದೆನೆಂದು ತಿಳಿಯುವುದು.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.


ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”


ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


“ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು