Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:12 - ಪರಿಶುದ್ದ ಬೈಬಲ್‌

12 ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನ್ನು, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’” ಎಂದು ಪ್ರಶ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಗೋ, ಗೋಡೆ ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ಗೋಡೆಯು ಬಿದ್ದ ಮೇಲೆ ನೀವು ಬಳಿದ ಸುಣ್ಣ ಎಲ್ಲಿ ಎಂದು ನಿಮ್ಮನ್ನು ಕೇಳುವರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:12
11 ತಿಳಿವುಗಳ ಹೋಲಿಕೆ  

ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.


ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.


ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದ್ದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವರುಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು.


ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು.


ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ “ಬಂಡೆ” ಎಲ್ಲಿ?


ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು.


ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕಲ್ಲು ಮತ್ತು ಬಲವಾದ ಮಳೆಯನ್ನು ಕಳುಹಿಸುವೆನು. ಗಾಳಿಯು ಬಲವಾಗಿ ಬೀಸಿ ಸುಂಟರಗಾಳಿಯು ಬರುವುದು. ಆಗ ಗೋಡೆಯು ಮುರಿದುಬೀಳುವುದು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು