Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:19 - ಪರಿಶುದ್ದ ಬೈಬಲ್‌

19 ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:19
23 ತಿಳಿವುಗಳ ಹೋಲಿಕೆ  

ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


ಪಕ್ಷಪಾತ ತಪ್ಪು. ಕೆಲವರಾದರೋ ಒಂದು ತುಂಡು ರೊಟ್ಟಿಗಾಗಿಯೂ ತಪ್ಪು ಮಾಡುವರು.


“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.


ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


“‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.


ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ.


ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ, ಆದರೆ ಆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ಆ ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು.


ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.


ಆದ್ದರಿಂದ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ನೀವು ಆ ಬಟ್ಟೆಯ ತೋಳುಪಟ್ಟಿಯನ್ನು ಜನರು ಬೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನ್ನು ಸ್ವತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನ್ನು ಹರಿದುಹಾಕುವೆನು. ಆಗ ಜನರು ನಿಮ್ಮ ಬಂಧನದಿಂದ ವಿಮುಕ್ತರಾಗುವರು. ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.


ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.


ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು