Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:2 - ಪರಿಶುದ್ದ ಬೈಬಲ್‌

2 “ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನ್ನ ಪರವಾಗಿ ಹೇಳಬೇಕು. ಅವರು ನಿಜವಾಗಿ ನನ್ನ ಪರವಾಗಿ ಮಾತನಾಡುವುದಿಲ್ಲ. ಅವರು ಏನು ಹೇಳಬೇಕೆಂದು ಇಷ್ಟಪಡುತ್ತಾರೋ ಅದನ್ನೇ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನ್ನಬೇಕು, ‘ಯೆಹೋವನ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:2
35 ತಿಳಿವುಗಳ ಹೋಲಿಕೆ  

ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನ್ನು ನೋಡು. ಆ ಪ್ರವಾದಿನಿಯರು ನನ್ನ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದ್ದರಿಂದ ನೀನು ನನ್ನ ಪರವಾಗಿ ಅವರ ವಿರುದ್ಧವಾಗಿ ಮಾತನಾಡಬೇಕು. ಅವರಿಗೆ ಈ ಮಾತುಗಳನ್ನು ಹೇಳಬೇಕು.


ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.


“ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.


ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


“ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದ್ದರಿಂದ ನಿಮಗೆ ಕತ್ತಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದ್ದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.


ಆದ್ದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ.


ಆದ್ದರಿಂದ ಕುರಬರೇ, ಯೆಹೋವನ ಮಾತುಗಳನ್ನು ಕೇಳಿರಿ. ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ,


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಬುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಬರುವವು. ನೀವು ನಿಮ್ಮ ಸ್ವಂತ ಆತ್ಮವನ್ನು ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನ್ನೂ ಕಂಡಿಲ್ಲ.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.


ಆದರೆ ನೀವೆಂದಿಗೂ ಬಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “‘ಆ ಪ್ರವಾದಿಗಳ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.


ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.


ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಆದಕಾರಣ ಜೆರುಸಲೇಮಿನಲ್ಲಿರುವ ಅಧಿಪತಿಗಳೇ, ಯೆಹೋವನ ಸಂದೇಶವನ್ನು ನೀವು ಕೇಳಬೇಕು. ಆದರೆ ನೀವು ಅದನ್ನು ಕೇಳಲು ನಿರಾಕರಿಸುತ್ತಿದ್ದೀರಿ.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,


ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು