Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:1 - ಪರಿಶುದ್ದ ಬೈಬಲ್‌

1 ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಲು ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು ನನ್ನ ಮುಂದೆ ಕೂತುಕೊಂಡಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:1
13 ತಿಳಿವುಗಳ ಹೋಲಿಕೆ  

ಒಂದು ದಿವಸ ನಾನು ನನ್ನ ಮನೆಯಲ್ಲಿ ಕುಳಿತುಕೊಂಡಿದ್ದೆನು. ಯೆಹೂದದ ನಾಯಕರು ನನ್ನ ಮುಂದೆ ಕುಳಿತಿದ್ದರು. ಇದು ಸೆರೆಹಿಡಿದ ಆರನೇ ವರ್ಷದ, ಆರನೆಯ ತಿಂಗಳಿನ, ಐದನೇ ದಿವಸವಾಗಿತ್ತು. ಫಕ್ಕನೆ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ನಾನು ಪರವಶನಾದೆನು.


ಮಾರ್ಗದರ್ಶನಕ್ಕಾಗಿ ಯೆಹೋವನನ್ನು ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನ್ನ ಎದುರಿನಲ್ಲಿ ಕುಳಿತುಕೊಂಡರು.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.


ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.


ಆಗ ಪೇತ್ರನು ಪವಿತ್ರಾತ್ಮಭರಿತನಾದನು. ಅವನು ಅವರಿಗೆ, “ಜನನಾಯಕರೇ ಮತ್ತು ಹಿರಿಯನಾಯಕರೇ,


ಮರುದಿನ ಯೆಹೂದ್ಯನಾಯಕರು, ಯೆಹೂದ್ಯರ ಹಿರಿಯನಾಯಕರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಲ್ಲಿ ಸಭೆಸೇರಿದರು.


ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು.


ಆಗ ಯೆಹೋವನ ವಾಕ್ಯವು ನನಗೆ ಬಂತು. ಆತನು ನನಗೆ ಹೇಳಿದ್ದೇನೆಂದರೆ,


“‘ನೀನು ಅವರಿಗೆ ಏನೂ ಅಲ್ಲ. ಒಬ್ಬ ಪ್ರೇಮಗೀತೆಯನ್ನು ಹಾಡುವ ಹಾಡುಗಾರ. ನಿನಗೆ ಮಧುರವಾದ ಕಂಠವಿದೆ. ನೀನು ವಾದ್ಯವನ್ನು ಚೆನ್ನಾಗಿ ಬಾರಿಸುವಿ. ಅವರು ನಿನ್ನ ಮಾತುಗಳನ್ನು ಕೇಳಿದರೂ ನೀನು ಹೇಳಿದಂತೆ ಮಾಡುವದಿಲ್ಲ.


ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.


“ನರಪುತ್ರನೇ, ಇಸ್ರೇಲಿನ ಹಿರಿಯರೊಂದಿಗೆ ಮಾತಾಡಿ ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನೀವು ನನ್ನ ಬುದ್ಧಿವಾದವನ್ನು ಕೇಳಲು ಬಂದಿರುವಿರಾ? ನನ್ನ ಜೀವದಾಣೆ, ನನ್ನ ಬುದ್ಧಿವಾದವನ್ನು ನಿಮಗೆ ಹೇಳುವದಿಲ್ಲವೆಂದು ನಾನು ಪ್ರಮಾಣಮಾಡುತ್ತೇನೆ. ನನ್ನ ಒಡೆಯನಾದ ಯೆಹೋವನ ವಾಕ್ಯವಿದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು