Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:17 - ಪರಿಶುದ್ದ ಬೈಬಲ್‌

17 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:17
18 ತಿಳಿವುಗಳ ಹೋಲಿಕೆ  

ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


“ಅಯ್ಯೋ, ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನ್ನ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು!


ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.


ಆದ್ದರಿಂದ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿನಗೆ ವಿರುದ್ಧವಾಗಿ ಖಡ್ಗವನ್ನು ತರುವೆನು. ನಾನು ನಿನ್ನ ಜನರನ್ನೂ ಪ್ರಾಣಿಗಳನ್ನೂ ಸಂಪೂರ್ಣವಾಗಿ ಸಂಹರಿಸುವೆನು.


ನಾನು ನಿನಗೆ ವಿರುದ್ಧವಾಗಿ ಬರಗಾಲಗಳನ್ನು ಮತ್ತು ಕ್ರೂರಪ್ರಾಣಿಗಳನ್ನು ಕಳುಹಿಸುವೆನು. ಅವು ನಿನ್ನ ಮಕ್ಕಳನ್ನು ಕೊಲ್ಲುತ್ತವೆ. ನಿನ್ನನ್ನು ಕೊಲ್ಲುವುದಕ್ಕಾಗಿ ರೋಗಗಳನ್ನು, ಹಿಂಸೆಯನ್ನು ಮತ್ತು ಯುದ್ಧಗಳನ್ನು ಕಳುಹಿಸುವೆನು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ. ಮತ್ತು ಇದು ನೆರವೇರುತ್ತದೆ.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಬೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಧಿಸಿದ್ದಾನೆ.”


ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


ಯೆಹೋವನ ನುಡಿ ನನಗೆ ಬಂತು. ಆತನು ಹೇಳಿದ್ದೇನೆಂದರೆ,


“ನರಪುತ್ರನೇ, ನಿನ್ನ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು, ‘ನಾನು ಈ ದೇಶದೊಂದಿಗೆ ಯುದ್ಧ ಮಾಡಲು ಶತ್ರು ಸೈನಿಕರನ್ನು ಬರಮಾಡುತ್ತೇನೆ. ಈ ಸಮಯದಲ್ಲಿ ಜನರು ಒಬ್ಬ ಕಾವಲುಗಾರನನ್ನು ಆರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು