Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:3 - ಪರಿಶುದ್ದ ಬೈಬಲ್‌

3 ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಇಲ್ಲ. ಅದನ್ನು ಗೂಟವನ್ನಾಗಿ ಮಾಡಿ ಅದರಲ್ಲಿ ಪಾತ್ರೆಗಳನ್ನು ತೂಗುಹಾಕಬಹುದೋ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದ್ರಾಕ್ಷಿಯ ಕಟ್ಟಿಗೆಯನ್ನು ಬಳಸಿ ಮಾಡುತ್ತಾರೆಯೆ ಏನನ್ನಾದರು? ಸಾಮಗ್ರಿಗಳನ್ನು ತಗಲಿಹಾಕಲು ಅದರಿಂದ ಮಾಡುತ್ತಾರೆಯೇ ಗೂಟವನ್ನಾದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದ್ರಾಕ್ಷೆಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವದನ್ನಾದರೂ ಮಾಡುವರೋ? ಯಾವ ಸಾಮಾನನ್ನಾದರೂ ತಗಲಿಹಾಕುವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:3
7 ತಿಳಿವುಗಳ ಹೋಲಿಕೆ  

“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.


“ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.


ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.


“ನರಪುತ್ರನೇ, ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ.


ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು