Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:13 - ಪರಿಶುದ್ದ ಬೈಬಲ್‌

13 ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:13
25 ತಿಳಿವುಗಳ ಹೋಲಿಕೆ  

ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ.


ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’


ನಾನು ನಿನಗೆ ರೊಟ್ಟಿ, ಜೇನು ಮತ್ತು ಎಣ್ಣೆಯನ್ನು ಕೊಟ್ಟಿದ್ದೆನು. ಆದರೆ ನೀನು ಆ ಆಹಾರವನ್ನು ಮೂರ್ತಿಗಳಿಗೆ ಕೊಟ್ಟೆ. ಆ ಸುಳ್ಳು ದೇವರುಗಳನ್ನು ಮೆಚ್ಚಿಸುವದಕ್ಕೋಸ್ಕರ ನೀನು ಅವುಗಳನ್ನು ಸುಗಂಧವಾಸನೆಯ ಕಾಣಿಕೆಯಂತೆ ಅರ್ಪಿಸಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.


ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.


ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿನ್ನ ಮಂದೆ ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಬೇಕಾಗಿತ್ತು.


ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.


ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.


ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.”


ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, ‘ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು’ ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು.


ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು.


ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು.


ನಾನು ನಿನಗೆ ಕೊಟ್ಟ ಬೆಳ್ಳಿಬಂಗಾರಗಳ ಆಭರಣಗಳಿಂದ ನೀನು ಗಂಡು ವಿಗ್ರಹಗಳನ್ನು ಮಾಡಿಕೊಂಡು ಅವುಗಳೊಂದಿಗೆ ಸೂಳೆಯಂತೆ ವರ್ತಿಸಿದೆ.


“ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸ್ನಾನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.


ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು.


ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು