ಯೆಹೆಜ್ಕೇಲನು 16:15 - ಪರಿಶುದ್ದ ಬೈಬಲ್15 ದೇವರು ಹೀಗೆಂದನು: “ನೀನು ನಿನ್ನ ಸೌಂದರ್ಯದ ಮೇಲೆ ಭರವಸೆ ಉಳ್ಳವಳಾಗಿದ್ದೆ. ನಿನ್ನ ಪ್ರಖ್ಯಾತಿಯಿಂದಾಗಿ ನನಗೆ ಅಪನಂಬಿಗಸ್ತಳಾದಿ. ನಿನ್ನನ್ನು ಹಾದುಹೋಗುವ ಪ್ರತಿವ್ಯಕ್ತಿಯೊಂದಿಗೆ ನೀನು ವೇಶ್ಯೆಯಂತೆ ನಡೆದುಕೊಂಡಿ. ನೀನು ನಿನ್ನನ್ನು ಅವರಿಗೊಪ್ಪಿಸಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸೆಯಿಟ್ಟು, ನಿನ್ನ ಕೀರ್ತಿಯ ನಿಮಿತ್ತವಾಗಿ ವೇಶ್ಯೆಯಾದೆ. ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರ ಮಾಡಿದೆ ಮತ್ತು ನಿನ್ನ ಸೌಂದರ್ಯ ಅವನದಾಯಿತು. ಅಧ್ಯಾಯವನ್ನು ನೋಡಿ |
ಆ ಬಳಿಕ ಆ ಹಾಸಿಗೆಯ ಮೇಲೆ ಮಲಗಿ ಆ ದೇವರುಗಳನ್ನು ಪ್ರೀತಿಸಿ ನನಗೆ ವಿರುದ್ಧವಾಗಿ ಪಾಪ ಮಾಡುತ್ತೀರಿ. ನೀವು ಆ ದೇವರುಗಳನ್ನು ಪ್ರೀತಿಸುತ್ತೀರಿ. ಅವುಗಳ ಬೆತ್ತಲೆ ಶರೀರಗಳನ್ನು ನೋಡುವದರಲ್ಲಿ ಸಂತೋಷಿಸುವಿರಿ. ನೀವು ನನ್ನೊಂದಿಗೆ ಇದ್ದಿರಿ. ಆದರೆ ಈಗ ನನ್ನನ್ನು ತೊರೆದು ಅವುಗಳನ್ನು ಸೇರಿಕೊಂಡಿದ್ದೀರಿ. ನನ್ನನ್ನು ಜ್ಞಾಪಕ ಹುಟ್ಟಿಸುವ ವಿಷಯಗಳನ್ನು ನೀವು ಅಡಗಿಸಿಡುತ್ತೀರಿ. ಅವುಗಳನ್ನು ಬಾಗಿಲ ಹಿಂದೆ ಅಡಗಿಸಿಡುತ್ತೀರಿ. ಅನಂತರ ನೀವು ಹೋಗಿ ಆ ಸುಳ್ಳುದೇವರೊಂದಿಗೆ ಒಪ್ಪಂದ ಮಾಡುತ್ತೀರಿ.
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.