Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:23 - ಪರಿಶುದ್ದ ಬೈಬಲ್‌

23 “ಓ ಜೆರುಸಲೇಮೇ, ಎಂಥಾ ಭಯಂಕರ, ನಿನಗೆಂಥಾ ಭಯಂಕರವಾಗಿರುವುದು ಸಂಭವಿಸುತ್ತದೆ!” ಎನ್ನುತ್ತಾನೆ ನನ್ನ ಒಡೆಯನಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಯ್ಯೋ, ನಿನಗೆ ಧಿಕ್ಕಾರ! ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಯ್ಯಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ ಎಂಬದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:23
12 ತಿಳಿವುಗಳ ಹೋಲಿಕೆ  

ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೆಲ್ಲರೇ, ಹರ್ಷಗೊಳ್ಳಿರಿ! ಆದರೆ ಭೂಮಿಯೇ, ಸಮುದ್ರವೇ, ಸೈತಾನನು ನಿಮ್ಮ ಬಳಿಗೆ ಬಂದಿರುವುದರಿಂದ ನಿಮಗೆ ದುರ್ಗತಿಯುಂಟಾಗುವುದು! ಸೈತಾನನು ಕೋಪದಿಂದ ತುಂಬಿಕೊಂಡಿದ್ದಾನೆ. ತನಗಿರುವುದು ಸ್ವಲ್ಪಕಾಲವೆಂಬುದು ಅವನಿಗೆ ತಿಳಿದಿದೆ.”


ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.


ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು.


“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಬುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಬರುವವು. ನೀವು ನಿಮ್ಮ ಸ್ವಂತ ಆತ್ಮವನ್ನು ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನ್ನೂ ಕಂಡಿಲ್ಲ.


ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


ನಿನ್ನ ಅಸಹ್ಯಕೃತ್ಯಗಳನ್ನೂ ಸೂಳೆಯಂತೆ ವರ್ತಿಸುತ್ತಿರುವುದನ್ನೂ ನಿನ್ನ ಎಳೆತನದ ಸಮಯವನ್ನೂ ಮತ್ತು ನಿನ್ನ ಸ್ವಂತ ರಕ್ತದಲ್ಲಿ ಬೆತ್ತಲೆಯಾಗಿ ಹೊರಳಾಡುತ್ತಿದ್ದುದನ್ನೂ ನೀನು ಮರೆತುಬಿಟ್ಟೆ.


“ನೀನು ಎಲ್ಲಾ ದುಷ್ಕೃತ್ಯಗಳನ್ನು ಮಾಡಿದ ನಂತರ ಸುಳ್ಳು ದೇವರುಗಳಿಗಾಗಿ ಎತ್ತರವಾದ ಸ್ಥಳಗಳಲ್ಲಿ ಹೆಚ್ಚು ಪೂಜಾಸ್ಥಳಗಳನ್ನು ಮಾಡಿದೆ. ಪ್ರತಿಯೊಂದು ರಸ್ತೆಯ ಚೌಕಗಳಲ್ಲಿ ಅನ್ಯದೇವರುಗಳಿಗಾಗಿ ಪೂಜಾಸ್ಥಳಗಳನ್ನು ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು