Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:26 - ಪರಿಶುದ್ದ ಬೈಬಲ್‌

26 ಬಳಿಕ ನಿನ್ನ ನೆರೆಯವರೂ ಅತೀ ಕಾಮುಕರೂ ಆಗಿದ್ದ ಈಜಿಪ್ಟಿನವರ ಬಳಿಗೆ ನೀನು ಹೋದೆ. ನನ್ನನ್ನು ಕೋಪಗೊಳಿಸುವುದಕ್ಕಾಗಿ ನೀನು ಅವರೊಂದಿಗೆ ಹಲವಾರು ಸಲ ಲೈಂಗಿಕ ಸಂಪರ್ಕ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಈಜಿಪ್ಟರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ಕೆರಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿನ್ನ ನೆರೆಯವರೂ ಅತಿಕಾವಿುಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ರೇಗಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:26
15 ತಿಳಿವುಗಳ ಹೋಲಿಕೆ  

ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.


ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.


ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.


ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಧಿಸುವುದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.


ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಬಗೆಯ ಕ್ರಿಮಿಕೀಟಗಳನ್ನು ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನ್ನು ಕಂಡೆನು.


ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.


ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು