Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:44 - ಪರಿಶುದ್ದ ಬೈಬಲ್‌

44 “ಜ್ಞಾನೋಕ್ತಿಗಳನ್ನು ಉಲ್ಲೇಖಿಸಲು ಇಚ್ಛಿಸುವ ಪ್ರತಿಯೊಬ್ಬನು ನಿನ್ನ ವಿರುದ್ಧವಾಗಿ ಇದನ್ನು ಉಲ್ಲೇಖಿಸುವನು: ‘ತಾಯಿಯಂತೆ ಮಗಳು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 “ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ಬಗ್ಗೆ ಖಂಡಿತವಾಗಿ ನುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಹಾ, ಗಾದೆಗಳಲ್ಲಿ ಜಾಣರು ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ ‘ “ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:44
12 ತಿಳಿವುಗಳ ಹೋಲಿಕೆ  

ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


‘ಕೆಟ್ಟಕಾರ್ಯಗಳನ್ನು ಕೆಟ್ಟ ಜನರೇ ಮಾಡುತ್ತಾರೆ!’ ಎಂಬ ಹಳೆಯ ನಾಣ್ಣುಡಿಯೊಂದಿದೆ. “ನಾನು ಕೆಟ್ಟದ್ದನ್ನೇನೂ ಮಾಡಿಲ್ಲ! ನಾನು ಕೆಟ್ಟ ವ್ಯಕ್ತಿಯಲ್ಲ! ಆದ್ದರಿಂದ ನಾನು ನಿನಗೆ ಕೇಡು ಮಾಡುವುದಿಲ್ಲ!


ನೀನು ನಿನ್ನ ತಾಯಿಯ ಮಗಳು. ನೀನು ನಿನ್ನ ಗಂಡನನ್ನು ಮತ್ತು ಮಕ್ಕಳನ್ನು ತಿರಸ್ಕರಿಸಿರುವೆ. ನೀನು ನಿನ್ನ ಸಹೋದರಿಯಂತಿರುವೆ. ನೀವು ನಿಮ್ಮ ಗಂಡಂದಿರನ್ನೂ ಮಕ್ಕಳನ್ನೂ ತಿರಸ್ಕರಿಸಿದಿರಿ. ನೀವು ನಿಮ್ಮನ್ನು ಹೆತ್ತವರ ತರಹ ಇದ್ದೀರಿ. ನಿಮ್ಮ ತಾಯಿ ಹಿತ್ತಿಯಳಾಗಿದ್ದಳು. ನಿಮ್ಮ ತಂದೆಯು ಅಮೋರಿಯದವನಾಗಿದ್ದನು.


ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದನು.


ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.


ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು.


ಅಹಾಬನು ದ್ರಾಕ್ಷಿತೋಟಕ್ಕೆ ಹೋಗಿ ಅದನ್ನು ತನ್ನದನ್ನಾಗಿಸಿಕೊಂಡನು.


“ನರಪುತ್ರನೇ, ‘ಸಂಕಷ್ಟದ ದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಬ ಈ ಗಾದೆಯನ್ನು ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?


“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವುದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು: ‘ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು